ಮಂಗಳೂರು: ವಿದೇಶದಲ್ಲಿ ಕಳೆದ ಒಂದೂವರೆ ದಶಕಕ್ಕೂ ಅಧಿಕ ವರ್ಷಗಳಿಂದ ನಿರಂತರ ತುಳು, ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಸರಣಿ ಕಾರ್ಯಕ್ರಮ ಸಮಾರಂಭ ಹಾಗೂ ಸಾಮಾಜಿಕ ಕಳಕಳಿಯ ಸೇವೆ ನಡೆಸಿ ಮುನ್ನಡೆಯುತ್ತಿರುವ ಗಮ್ಮತ್ ಕಲಾವಿದೆರ್ ದುಬೈ ಇದರ 2026-27ನೇ ಸಾಲಿನ ಅಧ್ಯಕ್ಷರಾಗಿ ಹಿರಿಯ ನಾಟಕ ಹಾಗೂ ಕಿರುಚಿತ್ರ ಕಲಾವಿದ ವಾಸು ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ದುಬೈನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿ ರಚಿಸಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ನಾಟಕ ಹಾಗೂ ಯಕ್ಷಗಾನ ಕಲಾವಿದೆ ಸಮಂತಾ ಗಿರೀಶ್, ಕೋಶಾಧಿಕಾರಿಯಾಗಿ ಅನುಭವಿ ರಂಗಕಲಾವಿದೆ ಜೆನೆಟ್ ಸಿಕ್ಕೇರ, ಸಲಹಾ ಸಮಿತಿಯ ಗೌರವ ಪೋಷಕರಾಗಿ ಉಧ್ಯಮಿ ಹರೀಶ್ ಬಂಗೇರ, ತಂಡದ ಕಲಾತ್ಮಕ ಮಾರ್ಗದರ್ಶಕರಾಗಿ ರಂಗ ನಿರ್ದೇಶಕ ವಿಶ್ವನಾಥ ಬಿ. ಶೆಟ್ಟಿ ಆಯ್ಕೆಯಾಗಿದ್ದಾರೆ.

