ಮಂಗಳೂರು: ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ (KNSS) ಮಂಗಳೂರು ಕರಯೋಗಂ ವತಿಯಿಂದ ಓಣಂ ಆಚರಣೆಯನ್ನು ಆ.16ರಂದು ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಕೂಟ್ಟಕ್ಕಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಬೆಳಗ್ಗೆ 9.30ಕ್ಕೆ ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ಬಳಿಕ ತಿರುವಾತಿರ ನೃತ್ಯ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾಧಕರ ಸನ್ಮಾನ ನಡೆಯಲಿದೆ.
ಕಣ್ಣೂರಿನ ಮಯ್ಯಿಲ್ನ ಖ್ಯಾತ ವಾಗ್ಮಿ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಧಾಕೃಷ್ಣನ್ ಮಣಿಕೋತ್ ಮುಖ್ಯ ಅತಿಥಿ ಹಾಗೂ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.
ಸಚಿವ ಯು.ಟಿ.ಖಾದರ್, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ವೈ., ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಕಿಶೋರ್ ಕುಮಾರ್ ಬೊಟ್ಯಾಡಿ ಹಾಗೂ ಪಿ.ವಿ.ಮೋಹನ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೇರಳದ ಸಾಂಪ್ರದಾಯಿಕ ಓಣಂ ಸದ್ಯ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳು ಆಚರಣೆಯ ಪ್ರಮುಖ ಆಕರ್ಷಣೆಯಾಗಿರಲಿವೆ. ಸದಸ್ಯರು, ಕುಟುಂಬಸ್ಥರು ಹಾಗೂ ಹಿತೈಷಿಗಳು ಒಟ್ಟಾಗಿ ಓಣಂ ಹಬ್ಬದ ಸಂಭ್ರಮವನ್ನು ಆಚರಿಸಲಿದ್ದಾರೆ.
KNSS ಅಧ್ಯಕ್ಷ ಮುರಳಿ ಹೊಸಮಜಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಸ್ಥೆಯ ಮಂಡಳಿ ಪದಾಧಿಕಾರಿಗಳು ಹಾಗೂ ಕರಯೋಗಂ ಸಮಿತಿ ಸದಸ್ಯರು ಉಪಸ್ಥಿತರಿರಲಿದ್ದಾರೆ.

