ಮಂಗಳೂರು: ಮಂಗಳೂರಿನ ಶಕ್ತಿನಗರದ ವಿಶೇಷಚೇತನ ಹಾಗೂ ಬುದ್ಧಿಮಾಂದ್ಯ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ವಸತಿ ಶಾಲೆ ಮತ್ತು ತರಬೇತಿ ಕೇಂದ್ರವಾದ “ಸಾನಿಧ್ಯ” ವತಿಯಿಂದ ಆಯೋಜಿಸಲಾಗಿದ್ದ “ಶಿಕ್ಷಕರ ದಿನಾಚರಣೆ” ಹಾಗೂ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸನ್ಮಾನ್ಯ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಯವರು ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿ ಶಿಕ್ಷಕರಿಗೆ ಶುಭಾಶಯಗಳನ್ನು ಸಲ್ಲಿಸಿ, ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಮಹತ್ವದ ಪಾತ್ರವನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಸನ್ಮಾನ್ಯ ಸಂತೋಷ್ ಕುಮಾರ್ ಶೆಟ್ಟಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಸಾನಿಧ್ಯ ಸಂಸ್ಥೆಯ ವಸಂತ್ ಕುಮಾರ್ ಶೆಟ್ಟಿ, ಮಹಾಬಲ ಮಾರ್ಲ, ಜಗದೀಶ್ ಶೆಟ್ಟಿ ಹಾಗೂ ಮತ್ತಿತರ ಗೌರವಾನ್ವಿತರು ಉಪಸ್ಥಿತರಿದ್ದರು.

ಮಂಗಳೂರು ಮಿತ್ರ

