ಬೆಂಗಳೂರು : ಸ್ಯಾಂಡಲ್ವುಡ್ ನಟ ಸಂತೋಷ್ ಬಾಲರಾಜ್ (34) ಇಂದು ಬೆಳಿಗ್ಗೆ 9.30 ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್ನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು.

ನಟ ಸಂತೋಷ್ ಬಾಲರಾಜ್ ಅವರ ಅಕಾಲಿಕ ನಿಧನಕ್ಕೆ ಕನ್ನಡ ಚಿತ್ರರಂಗ ಶೋಕ ವ್ಯಕ್ತಪಡಿಸಿದೆ. ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರೂ ಸಂತೋಷ್ ಬಾಲರಾಜ್ ಅವರ ಸ್ಥಿತಿ ಹದಗೆಟ್ಟಿದ್ದು, ದುರದೃಷ್ಟಕರ ಸಾವಿಗೆ ಕಾರಣವಾಯಿತು.ಯಕೃತ್ತು ಮತ್ತು ಮೂತ್ರಪಿಂಡದ ಸಮಸ್ಯೆಗಳಿಂದ ತೀವ್ರ ಕಾಮಾಲೆ ರೋಗಕ್ಕೆ ಕಾರಣವಾದ ಕಾರಣ ಬೆಳಿಗ್ಗೆ 9:30 ರ ಸುಮಾರಿಗೆ ಅವರು ಕೊನೆಯುಸಿರೆಳೆದರು.

ಕಳೆದ ತಿಂಗಳು ಕಾಮಾಲೆ (ಜಾಂಡಿಸ್ ) ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ತೀವ್ರ ನಿಗಾ ಘಟಕದಲ್ಲಿದ್ದರು. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು.ಆದರೆ ಅಲ್ಪ ಸಮಯದಲ್ಲಿ ಅವರು ಗುಣಮುಖರಾದ ಬಳಿಕ ಪುನಃ ಅನಾರೋಗ್ಯಕ್ಕೆ ಒಳಗಾದ ನಂತರ ಅವರನ್ನು ಮತ್ತೊಮ್ಮೆ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ತೀವ್ರ ನಿಗಾ ಘಟಕದಲ್ಲಿದ್ದರು.
ಯಕೃತ್ತು ಮತ್ತು ಮೂತ್ರಪಿಂಡದ ಸಮಸ್ಯೆಗಳಿಂದಾಗಿ ಅವರಿಗೆ ಕಾಮಾಲೆ ರೋಗ ತಗುಲಿತ್ತು.ಮತ್ತು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈ ಸ್ಥಿತಿಯಿಂದಾಗಿ ಅವರು ಕೋಮಾಕ್ಕೆ ಜಾರಿದ್ದರು.

ಸಂತೋಷ್ ಬಾಲರಾಜ್ ಕನ್ನಡ ಚಲನಚಿತ್ರೋದ್ಯಮದಲ್ಲಿ ಭರವಸೆಯ ಪ್ರತಿಭೆಯಾಗಿದ್ದರು. ಅವರು 2009 ರಲ್ಲಿ ಕೆಂಪಾ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು,ಅವರು ಕರಿಯ-2, ಕೆಂಪ, ಗಣಪ, ಬರ್ಕ್ಲಿ ಮತ್ತು ಸತ್ಯ ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾಗಿದ್ದರು. ಸಂತೋಷ್ ಬಾಲರಾಜ್ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರರೂ ಆಗಿದ್ದರು. ಗಣಪ ಚಿತ್ರದ ಮೂಲಕ ಅವರು ಚಲನಚಿತ್ರೋದ್ಯಮದಲ್ಲಿ ಗಮನ ಸೆಳೆದರು.

ದರ್ಶನ್ ನಟಿಸಿದ ಕರಿಯ ಚಿತ್ರವನ್ನು ಆನೇಕಲ್ ಬಾಲರಾಜ್ ನಿರ್ಮಿಸಿದ್ದರು. ಅವರು ತಮ್ಮ ಮಗನನ್ನು ಕರಿಯ 2 ಎರಡನೇ ಭಾಗದಲ್ಲಿ ಚಿತ್ರರಂಗಕ್ಕೆ ಪರಿಚಯಿಸಿದರು.

ಆನೇಕಲ್ ಬಾಲರಾಜ್ ಅವರು ಮೇ 2022 ರಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಅವರು ಸಾವನ್ನಪ್ಪಿದರು.

