ಮೂಡಬಿದರೆ :ನೂತನವಾಗಿ ಪ್ರಾರಂಭಿಸಿರುವ ಪ್ರಿಯದರ್ಶಿನಿ ಸೊಸೈಟಿಯ ಮೂಡುಬಿದಿರೆ ಶಾಖೆಯನ್ನು ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರು ಜ್ಯೋತಿನಗರದ ಮಹಾಲಸ ಕಟ್ಟಡದಲ್ಲಿ ಉದ್ಘಾಟಿಸಿ ಶುಭಹಾರೈಸಿದರು ನಂತರ ಮಾತನಾಡಿದ ಅವರು ಸೊಸೈಟಿ ಬ್ಯಾಂಕ್ ಸ್ಥಾಪನೆ ಸುಲಭ ಆದರೆ ಮುಂದುವರಿಸಿಕೊಂಡು ಹೋಗೋದು ಕಷ್ಟವಿದೆ ,ಆದರೆ ರಾಜ್ಯದಲ್ಲಿ ಸಹಕಾರಿ ಕ್ಷೇತ್ರ ಪ್ರಗತಿಯಲ್ಲಿದೆ, ದ.ಕ.ಜಿಲ್ಲೆಯಲ್ಲೂ ಸಹಕಾರಿ ಬ್ಯಾಂಕುಗಳು ಲಾಭದಾಯಕವಾಗಿದೆ ಎಂದರು.ವಸಂತ್ ಬೆರ್ನಾರ್ಡ್ ಅಧ್ಯಕ್ಷತೆಯಲ್ಲಿ ಪ್ರಿಯದರ್ಶಿನಿ ಸೊಸೈಟಿಯ ನಾಲ್ಕನೇ ಶಾಖೆ ಇದಾಗಿದ್ದು ಅತಿಶೀಘ್ರದಲ್ಲೇ ಹತ್ತನೇ ಶಾಖೆ ಉದ್ಘಾಟನೆಯಾಗಲಿ ಎಂದು ಹಾರೈಸಿದರು.


ಮುಲ್ಕಿ ಅರಮನೆಯ ಅರಸರಾದ ದುಗ್ಗಣ್ಣ ಸಾವಂತರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಮಾಜಿ ಸಚಿವರಾದ ಕೆ.ಅಭಯಚಂದ್ರ ಜೈನ್, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಡಾ.ಎಂ.ಮೋಹನ ಆಳ್ವ,ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಚೌಟರ ಅರಮನೆಯ ಕುಲದೀಪ್ ಎಂ, ಕ್ರಿಸ್ತ ಶಾಂತಿ ಚರ್ಚ್ ನ ಸಂತೋಷ್ ಕುಮಾರ್, ಸಮಾಜಸೇವಕ ಸೂರ್ಯಕುಮಾರ್, ಚಿತ್ತರಂಜನ್ ಬೋಳಾರ್,ನ್ಯಾಯವಾದಿ ಶರತ್ ಶೆಟ್ಟಿ, ಹರ್ಷವರ್ಧನ ಪಡಿವಾಳ್, ಪ್ರವೀಣ್ ಕುಮಾರ್, ಕುಮಾರ್ ಪೂಜಾರಿ,ಪುರಂದರ ದೇವಾಡಿಗ,ಇಕ್ಬಾಲ್ ಕರೀಮ್,ಜೊಸ್ಸಿ ಮಿನೇಜಸ್, ದೇವದಾಸ್ ಭಟ್,ಪ್ರತಿಭಾ ಕುಳಾಯಿ,


ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್,ಶಾಖಾ ಪ್ರಬಂಧಕರಾದ ಅಭಿಷ್ಮಾ ಜೈನ್, ನಿರ್ದೇಶಕರಾದ ಗಣೇಶ್ ಕುಮಾರ್,ಧನಂಜಯ ಮಟ್ಟು, ಗೌತಮ್ ಜೈನ್,ತನುಜಾ ಶೆಟ್ಟಿ ,ನವೀನ್ ಸಾಲಿಯಾನ್ ಪಂಜ,ಲೆಕ್ಕಿಗರಾದ ಲೋಲಾಕ್ಷಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಪ್ರಿಯದರ್ಶಿನಿ ಸೊಸೈಟಿ ಅಧ್ಯಕ್ಷರಾದ ವಸಂತ್ ಬೆರ್ನಾರ್ಡ್ ಸ್ವಾಗತಿಸಿದರು. ಅಕ್ಷತಾ ಎಂ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

